ಕೋಲಾರ: ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ಎದೆ ಹಾಲನ್ನು ಮಗುವಿಗೆ ಕುಡಿಸಲು ಪ್ರತಿಯೊಬ್ಬ ತಾಯಂದಿರು ಮುಂದಾಗಬೇಕು ಎಂದು ಮೆಡಿಕಲ್ ಕಾಲೇಜಿನ ವೈದ್ಯ ಡಾ ನರೇಂದ್ರ ತಿಳಿಸಿದರು.
ಕೋಲಾರ ನಗರದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಶ್ರೀ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದಿಂದ ಮಂಗಳವಾರ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಪ್ರಾಕೃತಿಕವಾಗಿ ದೊರೆಯುವ ಎಲ್ಲಾ ವಸ್ತುಗಳು ಸಹ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ತಾಯಂದಿರಲ್ಲಿ ದೊರೆಯುವ ಹಾಲು ಸಹ ಅಮೃತವಿದ್ದಂತೆ ಬೆಳೆಯುವ ಮಕ್ಕಳಿಗೆ ತಾಯಿಯ ಹಾಲು ತುಂಬಾ ಮುಖ್ಯ ಎಲ್ಲರೂ ತಮ್ಮ ಮಕ್ಕಳಿಗೆ ತಮ್ಮ ಎದೆ ಹಾಲನ್ನು ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಕಾರ್ತಿಕ್, ಜಯಶ್ರೀ ನರ್ಸಿಂಗ್ ಕಾಲೇಜಿನ ಸರಿತಾ, ಕವಿತಾ, ಅಂಗನವಾಡಿ ಸಿಬ್ಬಂದಿ ಸೇರಿದಂತೆ ಬಾಣಂತಿಯರು ಕಾರ್ಯಕ್ರಮದಲ್ಲಿ ಇದ್ದು ಕಾಲೇಜಿನ ವಿಧ್ಯಾರ್ಥಿಗಳಿಂದ ಸ್ತನ್ಯಪಾನ ಅರಿವು ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…