ಕೋಲಾರ: ಮಗುವಿನ ಆರೋಗ್ಯದ ದೃಷ್ಟಿಯಿಂದ ತಾಯಿಯ ಎದೆ ಹಾಲನ್ನು ಮಗುವಿಗೆ ಕುಡಿಸಲು ಪ್ರತಿಯೊಬ್ಬ ತಾಯಂದಿರು ಮುಂದಾಗಬೇಕು ಎಂದು ಮೆಡಿಕಲ್ ಕಾಲೇಜಿನ ವೈದ್ಯ ಡಾ ನರೇಂದ್ರ ತಿಳಿಸಿದರು.
ಕೋಲಾರ ನಗರದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಶ್ರೀ ದೇವರಾಜ್ ಅರಸು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದಿಂದ ಮಂಗಳವಾರ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನಿಗೆ ಪ್ರಾಕೃತಿಕವಾಗಿ ದೊರೆಯುವ ಎಲ್ಲಾ ವಸ್ತುಗಳು ಸಹ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ತಾಯಂದಿರಲ್ಲಿ ದೊರೆಯುವ ಹಾಲು ಸಹ ಅಮೃತವಿದ್ದಂತೆ ಬೆಳೆಯುವ ಮಕ್ಕಳಿಗೆ ತಾಯಿಯ ಹಾಲು ತುಂಬಾ ಮುಖ್ಯ ಎಲ್ಲರೂ ತಮ್ಮ ಮಕ್ಕಳಿಗೆ ತಮ್ಮ ಎದೆ ಹಾಲನ್ನು ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಕಾರಣವಾಗುತ್ತಾರೆ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಕಾರ್ತಿಕ್, ಜಯಶ್ರೀ ನರ್ಸಿಂಗ್ ಕಾಲೇಜಿನ ಸರಿತಾ, ಕವಿತಾ, ಅಂಗನವಾಡಿ ಸಿಬ್ಬಂದಿ ಸೇರಿದಂತೆ ಬಾಣಂತಿಯರು ಕಾರ್ಯಕ್ರಮದಲ್ಲಿ ಇದ್ದು ಕಾಲೇಜಿನ ವಿಧ್ಯಾರ್ಥಿಗಳಿಂದ ಸ್ತನ್ಯಪಾನ ಅರಿವು ಕುರಿತಂತೆ ನಾಟಕವನ್ನು ಪ್ರದರ್ಶಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…