ಮೆಡಿಕವರ್ ಆಸ್ಪತ್ರೆ ತನ್ನ ಆರ್ಥೋಪೆಡಿಕ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ, ಅತ್ಯಾಧುನಿಕ ಆರ್ಥೊ ರೊಬೋಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಯಶಸ್ವಿಯಾಗಿ ಆರಂಭಿಸಿದೆ.
ಈ ತಂತ್ರಜ್ಞಾನದ ಮೂಲಕ ರೋಗಿಗಳಿಗೆ ಹೆಚ್ಚು ನಿಖರ ಹಾಗೂ ಅನುಕೂಲಕರ ಶಸ್ತ್ರಚಿಕಿತ್ಸೆಯನ್ನು ನೀಡುವುದು ಸಾಧ್ಯವಾಗಲಿದೆ.
ಈ ಹೊಸ ಉಪಕ್ರಮದಿಂದ ಮೂಳೆ ಮತ್ತು ಜೋಡಣೆ ಸಂಬಂಧಿತ ಜಟಿಲ ಸಮಸ್ಯೆಗಳಿಗೆ ಹೆಚ್ಚು ನಿಖರವಾದ ಮತ್ತು ಪರಿಣಾಮಕಾರಿ ಚಿಕಿತ್ಸೆ ದೊರೆಯಲಿದ್ದು, ವಿಶೇಷವಾಗಿ ಮಂಡಿ ಮತ್ತು ಹಿಪ್ ಜೋಡಣೆಯ ಬದಲಾವಣಾ ಶಸ್ತ್ರಚಿಕಿತ್ಸೆಗಳಲ್ಲಿ ರೊಬೋಟಿಕ್ ತಂತ್ರಜ್ಞಾನವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.
ಈ ತಂತ್ರಜ್ಞಾನದ ಅನುಷ್ಠಾನದಲ್ಲಿ ಮೆಡಿಕವರ್ ಆಸ್ಪತ್ರೆಯ ಹಿರಿಯ ಮೂಳೆ ತಜ್ಞರು ಡಾ. ಆರ್. ಡಿ. ಚಕ್ರವರ್ತಿ, ಡಾ. ರವೀಂದ್ರ ಪುಟ್ಟಸ್ವಾಮಯ್ಯ, ಡಾ. ಸಂಜಯ್ ಹೆಗಡೆ, ಡಾ. ಕೃಷ್ಣಕುಮಾರ್ ಮತ್ತು ಡಾ. ರಾಘವೇಂದ್ರ ರವರು ಪ್ರಮುಖ ಪಾತ್ರವಹಿಸಿದ್ದಾರೆ. ಈ ತಜ್ಞರು ರೊಬೋಟಿಕ್ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ವಿಶ್ವಮಟ್ಟದ ಚಿಕಿತ್ಸೆ ನೀಡಲು ಸದಾ ಸಿದ್ಧರಾಗಿದ್ದಾರೆ.
ಈ ಶಸ್ತ್ರಚಿಕಿತ್ಸಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಗೋಪಾಲ್ ಹಾಗೂ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಶೃತಿ ಕೊಯ್ಲಿ ಅವರು ಭಾಗವಹಿಸಿದ್ದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…