ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

ಬೆಂಗಳೂರು, ಫೆಬ್ರವರಿ 19: ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಕಿಮೋಥೆರಪಿ ಡೇ ಕೇರ್ ಸೆಂಟರ್ ಅಧಿಕೃತವಾಗಿ ಉದ್ಘಾಟನೆಯಾಯಿತು.

ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಅಸೋಸಿಯೇಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಜಿ, ಮೆಡಿಕವರ್ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿ, ನೀರಾಜ್ ಜೈಸುವಾಲ್, ವೈದ್ಯಕೀಯ ಅಧೀಕ್ಷಕಿ ಡಾ. ಶೃತಿ ಕೊಯ್ಲಿ ಮತ್ತು ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಆಸ್ಪತ್ರೆಯ ಎಲ್ಲಾ ಹಿರಿಯ ವೈದ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಈ ಸಮಾರಂಭದಲ್ಲಿ ಭಾಗವಹಿಸಿದರು.

ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಜಿ ಮಾತನಾಡಿ, ಇದು ಕೇವಲ ಒಂದು ಪ್ರಾರಂಭ ಮಾತ್ರ. ಭವಿಷ್ಯದಲ್ಲಿ ಮೆಡಿಕವರ್ ಆಸ್ಪತ್ರೆಯಲ್ಲಿ ಇನ್ನಷ್ಟು ವೈದ್ಯಕೀಯ ವಿಭಾಗಗಳು ಸ್ಥಾಪನೆಯಾಗಲಿವೆ. ನಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಮತ್ತು ಸೂಕ್ತ ಚಿಕಿತ್ಸೆ ದೊರೆಯುವಂತೆ ಎಲ್ಲ ಸೌಲಭ್ಯಗಳನ್ನು ನಾವು ಒದಗಿಸುವ ಭರವಸೆ ನೀಡುತ್ತೇವೆ ಎಂದು ತಿಳಿಸಿದರು.

ಮೆಡಿಕವರ್ ಗ್ರೂಪ್ CFO ಶ್ರೀ ನೀರಾಜ್ ಜೈಸುವಾಲ್ ಮಾತನಾಡಿ, ವೈಟ್‌ಫೀಲ್ಡ್‌ನಲ್ಲಿ ಮೆಡಿಕವರ್ ಆಸ್ಪತ್ರೆ ಅತ್ಯಾಧುನಿಕ ಮತ್ತು ವಿಶಾಲವಾದ ಸೌಲಭ್ಯಗಳನ್ನು ಹೊಂದಿದೆ. ಹೊಸ ಕಿಮೋಥೆರಪಿ ಡೇ ಕೇರ್ ಸೆಂಟರ್ ಮೂಲಕ ರೋಗಿಗಳಿಗೆ ಅತ್ಯುತ್ತಮ ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸುಸಜ್ಜಿತ ಕೇಂದ್ರದಿಂದ ರೋಗಿಗಳಿಗೆ ಸಮರ್ಥ ಮತ್ತು ಸುಗಮ ಚಿಕಿತ್ಸೆ ಲಭ್ಯವಾಗುವುದು ಖಚಿತ ಎಂದು ಅಭಿಪ್ರಾಯ ಪಟ್ಟರು.

ಹಿರಿಯ ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಲಹ್ಕರ್ ಮಾತಾಡಿ, ವೈದ್ಯಕೀಯ ತಂತ್ರಜ್ಞಾನದಲ್ಲಿ ಆದ ಹೊಸ ಪ್ರಗತಿಗಳಿಂದ ಕ್ಯಾನ್ಸರ್ ಚಿಕಿತ್ಸೆಯ ಪರಿಣಾಮಕಾರಿಯಾಗಿದೆ. ಆರಂಭಿಕ ಹಂತದಲ್ಲಿ ಪತ್ತೆಯಾಗುವ ಬಹುತೇಕ ಕ್ಯಾನ್ಸರ್‌ಗಳನ್ನು ಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಇದೆ. ಇಂದು ಟಾರ್ಗೆಟೆಡ್ ಥೆರಪಿ ಮತ್ತು ಇಮ್ಯುನೋಥೆರಪಿ ತಂತ್ರಜ್ಞಾನದಿಂದ ಟರ್ಮಿನಲ್‌ ಕ್ಯಾನ್ಸರ್‌ ಪೀಡಿತರೂ ಹೆಚ್ಚು ವರ್ಷಗಳ ಕಾಲ ಬದುಕುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉನ್ನತ ಮಟ್ಟದ ಬೆಳವಣಿಗೆ ನಡೆದಿದೆ. ನಾವು ಇದನ್ನು ಮುಂದುವರಿಸಿ, ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದ ಕೊನೆಯಲ್ಲಿ, ಮೆಡಿಕವರ್ ಆಸ್ಪತ್ರೆಯ ಸಿಬ್ಬಂದಿಗಳು ಕೇಕ್ ಕತ್ತರಿಸಿ ಈ ಹೊಸ ಪ್ರಯತ್ನವನ್ನು ಸಂಭ್ರಮಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

6 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago