ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

ಬೆಂಗಳೂರು, ಫೆಬ್ರವರಿ 19: ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಕಿಮೋಥೆರಪಿ ಡೇ ಕೇರ್ ಸೆಂಟರ್ ಅಧಿಕೃತವಾಗಿ ಉದ್ಘಾಟನೆಯಾಯಿತು.

ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಅಸೋಸಿಯೇಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಜಿ, ಮೆಡಿಕವರ್ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿ, ನೀರಾಜ್ ಜೈಸುವಾಲ್, ವೈದ್ಯಕೀಯ ಅಧೀಕ್ಷಕಿ ಡಾ. ಶೃತಿ ಕೊಯ್ಲಿ ಮತ್ತು ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಆಸ್ಪತ್ರೆಯ ಎಲ್ಲಾ ಹಿರಿಯ ವೈದ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಈ ಸಮಾರಂಭದಲ್ಲಿ ಭಾಗವಹಿಸಿದರು.

ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಜಿ ಮಾತನಾಡಿ, ಇದು ಕೇವಲ ಒಂದು ಪ್ರಾರಂಭ ಮಾತ್ರ. ಭವಿಷ್ಯದಲ್ಲಿ ಮೆಡಿಕವರ್ ಆಸ್ಪತ್ರೆಯಲ್ಲಿ ಇನ್ನಷ್ಟು ವೈದ್ಯಕೀಯ ವಿಭಾಗಗಳು ಸ್ಥಾಪನೆಯಾಗಲಿವೆ. ನಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಮತ್ತು ಸೂಕ್ತ ಚಿಕಿತ್ಸೆ ದೊರೆಯುವಂತೆ ಎಲ್ಲ ಸೌಲಭ್ಯಗಳನ್ನು ನಾವು ಒದಗಿಸುವ ಭರವಸೆ ನೀಡುತ್ತೇವೆ ಎಂದು ತಿಳಿಸಿದರು.

ಮೆಡಿಕವರ್ ಗ್ರೂಪ್ CFO ಶ್ರೀ ನೀರಾಜ್ ಜೈಸುವಾಲ್ ಮಾತನಾಡಿ, ವೈಟ್‌ಫೀಲ್ಡ್‌ನಲ್ಲಿ ಮೆಡಿಕವರ್ ಆಸ್ಪತ್ರೆ ಅತ್ಯಾಧುನಿಕ ಮತ್ತು ವಿಶಾಲವಾದ ಸೌಲಭ್ಯಗಳನ್ನು ಹೊಂದಿದೆ. ಹೊಸ ಕಿಮೋಥೆರಪಿ ಡೇ ಕೇರ್ ಸೆಂಟರ್ ಮೂಲಕ ರೋಗಿಗಳಿಗೆ ಅತ್ಯುತ್ತಮ ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸುಸಜ್ಜಿತ ಕೇಂದ್ರದಿಂದ ರೋಗಿಗಳಿಗೆ ಸಮರ್ಥ ಮತ್ತು ಸುಗಮ ಚಿಕಿತ್ಸೆ ಲಭ್ಯವಾಗುವುದು ಖಚಿತ ಎಂದು ಅಭಿಪ್ರಾಯ ಪಟ್ಟರು.

ಹಿರಿಯ ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಲಹ್ಕರ್ ಮಾತಾಡಿ, ವೈದ್ಯಕೀಯ ತಂತ್ರಜ್ಞಾನದಲ್ಲಿ ಆದ ಹೊಸ ಪ್ರಗತಿಗಳಿಂದ ಕ್ಯಾನ್ಸರ್ ಚಿಕಿತ್ಸೆಯ ಪರಿಣಾಮಕಾರಿಯಾಗಿದೆ. ಆರಂಭಿಕ ಹಂತದಲ್ಲಿ ಪತ್ತೆಯಾಗುವ ಬಹುತೇಕ ಕ್ಯಾನ್ಸರ್‌ಗಳನ್ನು ಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಇದೆ. ಇಂದು ಟಾರ್ಗೆಟೆಡ್ ಥೆರಪಿ ಮತ್ತು ಇಮ್ಯುನೋಥೆರಪಿ ತಂತ್ರಜ್ಞಾನದಿಂದ ಟರ್ಮಿನಲ್‌ ಕ್ಯಾನ್ಸರ್‌ ಪೀಡಿತರೂ ಹೆಚ್ಚು ವರ್ಷಗಳ ಕಾಲ ಬದುಕುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉನ್ನತ ಮಟ್ಟದ ಬೆಳವಣಿಗೆ ನಡೆದಿದೆ. ನಾವು ಇದನ್ನು ಮುಂದುವರಿಸಿ, ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದ ಕೊನೆಯಲ್ಲಿ, ಮೆಡಿಕವರ್ ಆಸ್ಪತ್ರೆಯ ಸಿಬ್ಬಂದಿಗಳು ಕೇಕ್ ಕತ್ತರಿಸಿ ಈ ಹೊಸ ಪ್ರಯತ್ನವನ್ನು ಸಂಭ್ರಮಿಸಿದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

1 hour ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago