ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

ಬೆಂಗಳೂರು, ಫೆಬ್ರವರಿ 19: ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಕಿಮೋಥೆರಪಿ ಡೇ ಕೇರ್ ಸೆಂಟರ್ ಅಧಿಕೃತವಾಗಿ ಉದ್ಘಾಟನೆಯಾಯಿತು.

ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಅಸೋಸಿಯೇಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಜಿ, ಮೆಡಿಕವರ್ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿ, ನೀರಾಜ್ ಜೈಸುವಾಲ್, ವೈದ್ಯಕೀಯ ಅಧೀಕ್ಷಕಿ ಡಾ. ಶೃತಿ ಕೊಯ್ಲಿ ಮತ್ತು ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಆಸ್ಪತ್ರೆಯ ಎಲ್ಲಾ ಹಿರಿಯ ವೈದ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಈ ಸಮಾರಂಭದಲ್ಲಿ ಭಾಗವಹಿಸಿದರು.

ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಜಿ ಮಾತನಾಡಿ, ಇದು ಕೇವಲ ಒಂದು ಪ್ರಾರಂಭ ಮಾತ್ರ. ಭವಿಷ್ಯದಲ್ಲಿ ಮೆಡಿಕವರ್ ಆಸ್ಪತ್ರೆಯಲ್ಲಿ ಇನ್ನಷ್ಟು ವೈದ್ಯಕೀಯ ವಿಭಾಗಗಳು ಸ್ಥಾಪನೆಯಾಗಲಿವೆ. ನಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಮತ್ತು ಸೂಕ್ತ ಚಿಕಿತ್ಸೆ ದೊರೆಯುವಂತೆ ಎಲ್ಲ ಸೌಲಭ್ಯಗಳನ್ನು ನಾವು ಒದಗಿಸುವ ಭರವಸೆ ನೀಡುತ್ತೇವೆ ಎಂದು ತಿಳಿಸಿದರು.

ಮೆಡಿಕವರ್ ಗ್ರೂಪ್ CFO ಶ್ರೀ ನೀರಾಜ್ ಜೈಸುವಾಲ್ ಮಾತನಾಡಿ, ವೈಟ್‌ಫೀಲ್ಡ್‌ನಲ್ಲಿ ಮೆಡಿಕವರ್ ಆಸ್ಪತ್ರೆ ಅತ್ಯಾಧುನಿಕ ಮತ್ತು ವಿಶಾಲವಾದ ಸೌಲಭ್ಯಗಳನ್ನು ಹೊಂದಿದೆ. ಹೊಸ ಕಿಮೋಥೆರಪಿ ಡೇ ಕೇರ್ ಸೆಂಟರ್ ಮೂಲಕ ರೋಗಿಗಳಿಗೆ ಅತ್ಯುತ್ತಮ ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸುಸಜ್ಜಿತ ಕೇಂದ್ರದಿಂದ ರೋಗಿಗಳಿಗೆ ಸಮರ್ಥ ಮತ್ತು ಸುಗಮ ಚಿಕಿತ್ಸೆ ಲಭ್ಯವಾಗುವುದು ಖಚಿತ ಎಂದು ಅಭಿಪ್ರಾಯ ಪಟ್ಟರು.

ಹಿರಿಯ ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಲಹ್ಕರ್ ಮಾತಾಡಿ, ವೈದ್ಯಕೀಯ ತಂತ್ರಜ್ಞಾನದಲ್ಲಿ ಆದ ಹೊಸ ಪ್ರಗತಿಗಳಿಂದ ಕ್ಯಾನ್ಸರ್ ಚಿಕಿತ್ಸೆಯ ಪರಿಣಾಮಕಾರಿಯಾಗಿದೆ. ಆರಂಭಿಕ ಹಂತದಲ್ಲಿ ಪತ್ತೆಯಾಗುವ ಬಹುತೇಕ ಕ್ಯಾನ್ಸರ್‌ಗಳನ್ನು ಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಇದೆ. ಇಂದು ಟಾರ್ಗೆಟೆಡ್ ಥೆರಪಿ ಮತ್ತು ಇಮ್ಯುನೋಥೆರಪಿ ತಂತ್ರಜ್ಞಾನದಿಂದ ಟರ್ಮಿನಲ್‌ ಕ್ಯಾನ್ಸರ್‌ ಪೀಡಿತರೂ ಹೆಚ್ಚು ವರ್ಷಗಳ ಕಾಲ ಬದುಕುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉನ್ನತ ಮಟ್ಟದ ಬೆಳವಣಿಗೆ ನಡೆದಿದೆ. ನಾವು ಇದನ್ನು ಮುಂದುವರಿಸಿ, ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದ ಕೊನೆಯಲ್ಲಿ, ಮೆಡಿಕವರ್ ಆಸ್ಪತ್ರೆಯ ಸಿಬ್ಬಂದಿಗಳು ಕೇಕ್ ಕತ್ತರಿಸಿ ಈ ಹೊಸ ಪ್ರಯತ್ನವನ್ನು ಸಂಭ್ರಮಿಸಿದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

5 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

10 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago