ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

ಬೆಂಗಳೂರು, ಫೆಬ್ರವರಿ 19: ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಕಿಮೋಥೆರಪಿ ಡೇ ಕೇರ್ ಸೆಂಟರ್ ಅಧಿಕೃತವಾಗಿ ಉದ್ಘಾಟನೆಯಾಯಿತು.

ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಅಸೋಸಿಯೇಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಜಿ, ಮೆಡಿಕವರ್ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿ, ನೀರಾಜ್ ಜೈಸುವಾಲ್, ವೈದ್ಯಕೀಯ ಅಧೀಕ್ಷಕಿ ಡಾ. ಶೃತಿ ಕೊಯ್ಲಿ ಮತ್ತು ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಆಸ್ಪತ್ರೆಯ ಎಲ್ಲಾ ಹಿರಿಯ ವೈದ್ಯರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಈ ಸಮಾರಂಭದಲ್ಲಿ ಭಾಗವಹಿಸಿದರು.

ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ಜಿ ಮಾತನಾಡಿ, ಇದು ಕೇವಲ ಒಂದು ಪ್ರಾರಂಭ ಮಾತ್ರ. ಭವಿಷ್ಯದಲ್ಲಿ ಮೆಡಿಕವರ್ ಆಸ್ಪತ್ರೆಯಲ್ಲಿ ಇನ್ನಷ್ಟು ವೈದ್ಯಕೀಯ ವಿಭಾಗಗಳು ಸ್ಥಾಪನೆಯಾಗಲಿವೆ. ನಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಮತ್ತು ಸೂಕ್ತ ಚಿಕಿತ್ಸೆ ದೊರೆಯುವಂತೆ ಎಲ್ಲ ಸೌಲಭ್ಯಗಳನ್ನು ನಾವು ಒದಗಿಸುವ ಭರವಸೆ ನೀಡುತ್ತೇವೆ ಎಂದು ತಿಳಿಸಿದರು.

ಮೆಡಿಕವರ್ ಗ್ರೂಪ್ CFO ಶ್ರೀ ನೀರಾಜ್ ಜೈಸುವಾಲ್ ಮಾತನಾಡಿ, ವೈಟ್‌ಫೀಲ್ಡ್‌ನಲ್ಲಿ ಮೆಡಿಕವರ್ ಆಸ್ಪತ್ರೆ ಅತ್ಯಾಧುನಿಕ ಮತ್ತು ವಿಶಾಲವಾದ ಸೌಲಭ್ಯಗಳನ್ನು ಹೊಂದಿದೆ. ಹೊಸ ಕಿಮೋಥೆರಪಿ ಡೇ ಕೇರ್ ಸೆಂಟರ್ ಮೂಲಕ ರೋಗಿಗಳಿಗೆ ಅತ್ಯುತ್ತಮ ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸುಸಜ್ಜಿತ ಕೇಂದ್ರದಿಂದ ರೋಗಿಗಳಿಗೆ ಸಮರ್ಥ ಮತ್ತು ಸುಗಮ ಚಿಕಿತ್ಸೆ ಲಭ್ಯವಾಗುವುದು ಖಚಿತ ಎಂದು ಅಭಿಪ್ರಾಯ ಪಟ್ಟರು.

ಹಿರಿಯ ಆನ್ಕೊಲೊಜಿಸ್ಟ್ ಡಾ. ಕಾಕೋಲಿ ಲಹ್ಕರ್ ಮಾತಾಡಿ, ವೈದ್ಯಕೀಯ ತಂತ್ರಜ್ಞಾನದಲ್ಲಿ ಆದ ಹೊಸ ಪ್ರಗತಿಗಳಿಂದ ಕ್ಯಾನ್ಸರ್ ಚಿಕಿತ್ಸೆಯ ಪರಿಣಾಮಕಾರಿಯಾಗಿದೆ. ಆರಂಭಿಕ ಹಂತದಲ್ಲಿ ಪತ್ತೆಯಾಗುವ ಬಹುತೇಕ ಕ್ಯಾನ್ಸರ್‌ಗಳನ್ನು ಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಇದೆ. ಇಂದು ಟಾರ್ಗೆಟೆಡ್ ಥೆರಪಿ ಮತ್ತು ಇಮ್ಯುನೋಥೆರಪಿ ತಂತ್ರಜ್ಞಾನದಿಂದ ಟರ್ಮಿನಲ್‌ ಕ್ಯಾನ್ಸರ್‌ ಪೀಡಿತರೂ ಹೆಚ್ಚು ವರ್ಷಗಳ ಕಾಲ ಬದುಕುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉನ್ನತ ಮಟ್ಟದ ಬೆಳವಣಿಗೆ ನಡೆದಿದೆ. ನಾವು ಇದನ್ನು ಮುಂದುವರಿಸಿ, ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದ ಕೊನೆಯಲ್ಲಿ, ಮೆಡಿಕವರ್ ಆಸ್ಪತ್ರೆಯ ಸಿಬ್ಬಂದಿಗಳು ಕೇಕ್ ಕತ್ತರಿಸಿ ಈ ಹೊಸ ಪ್ರಯತ್ನವನ್ನು ಸಂಭ್ರಮಿಸಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 minute ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

12 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago