ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರಿನಲ್ಲಿ ಇಂದಿನಿಂದ ಹೊಸದಾಗಿ ಪ್ರಾರಂಭಿಸಲಾದ ಸಂಜೆ ಓಪಿಡಿ ಸೇವೆಗೆ ಹಿರಿಯ ನಟ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಅನಂತ್ ನಾಗ್ ಅವರು ದೀಪ ಬೆಳಗಿ ಅಧಿಕೃತವಾಗಿ ಚಾಲನೆ ನೀಡಿದರು.
ಮೆಡಿಕವರ್ ಆಸ್ಪತ್ರೆಯಲ್ಲಿ ಈಗ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಸಂಜೆ 5 ರಿಂದ 8 ಗಂಟೆಯವರೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ಒಪಿಡಿ ಸೇವೆ ನೀಡಲಿದ್ದು, ಈ ಸೇವೆಯ ಮುಖ್ಯ ಉದ್ದೇಶವಾಗಿದ್ದು ಉದ್ಯೋಗಸ್ಥರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಹಗಲಿನಲ್ಲಿ ಆಸ್ಪತ್ರೆಗೆ ಬರುವ ಸಮಯವಿಲ್ಲದ ಸಂದರ್ಭದಲ್ಲಿ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗುತ್ತದೆ.
ಸಂಜೆ ಓಪಿಡಿಯಲ್ಲಿ ಲಭ್ಯವಿರುವ ತಜ್ಞರು:
· ಮಕ್ಕಳ ತಜ್ಞರು (ಪೀಡಿಯಾಟ್ರಿಕ್ಸ್)
· ಜನರಲ್ ಮೆಡಿಸಿನ್ ತಜ್ಞರು
· ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು
· ಮೂಳೆ ಮತ್ತು ಸಂಧ್ಯಸ್ಥಿ ತಜ್ಞರು (ಆರ್ಥೋಪೆಡಿಕ್ಸ್)
· ಶಸ್ತ್ರಚಿಕಿತ್ಸಾ ತಜ್ಞರು (ಜನರಲ್ ಸರ್ಜನ್)
ಕಾರ್ಯಕ್ರಮದಲ್ಲಿ ಮೆಡಿಕವರ್ ಆಸ್ಪತ್ರೆಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ನೀರಜ್ ಲಾಲ್, ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಅಲ್ಲದೇ ಆಸ್ಪತ್ರೆಯ ಎಲ್ಲಾ ವಿಭಾಗದ ತಜ್ಞ ವೈದ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ. ಅನಂತ್ ನಾಗ್ ಅವರಿಗೆ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಪದ್ಮಭೂಷಣ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ವಿಶೇಷ ಅಭಿನಂದನೆಗಳು ಸಲ್ಲಿಸಲಾಯಿತು. ಅವರು ತಮ್ಮ ಭಾಷಣದಲ್ಲಿ, “ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಹೆಚ್ಚಿನ ಸಮಯದಲ್ಲಿ ಲಭ್ಯವಿರುವುದು
ನಿಜವಾಗಿಯೂ ಶ್ಲಾಘನೀಯ. ಮೆಡಿಕವರ್ ಆಸ್ಪತ್ರೆಯ ಈ ಕಾರ್ಯ ಅತ್ಯಂತ ಉದಾತ್ತ ಮತ್ತು ಜನಪರ.” ಎಂದು ಹೇಳಿದರು.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…