ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರಿನಲ್ಲಿ ಇಂದಿನಿಂದ ಹೊಸದಾಗಿ ಪ್ರಾರಂಭಿಸಲಾದ ಸಂಜೆ ಓಪಿಡಿ ಸೇವೆಗೆ ಹಿರಿಯ ನಟ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಅನಂತ್ ನಾಗ್ ಅವರು ದೀಪ ಬೆಳಗಿ ಅಧಿಕೃತವಾಗಿ ಚಾಲನೆ ನೀಡಿದರು.
ಮೆಡಿಕವರ್ ಆಸ್ಪತ್ರೆಯಲ್ಲಿ ಈಗ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಸಂಜೆ 5 ರಿಂದ 8 ಗಂಟೆಯವರೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ಒಪಿಡಿ ಸೇವೆ ನೀಡಲಿದ್ದು, ಈ ಸೇವೆಯ ಮುಖ್ಯ ಉದ್ದೇಶವಾಗಿದ್ದು ಉದ್ಯೋಗಸ್ಥರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಹಗಲಿನಲ್ಲಿ ಆಸ್ಪತ್ರೆಗೆ ಬರುವ ಸಮಯವಿಲ್ಲದ ಸಂದರ್ಭದಲ್ಲಿ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗುತ್ತದೆ.
ಸಂಜೆ ಓಪಿಡಿಯಲ್ಲಿ ಲಭ್ಯವಿರುವ ತಜ್ಞರು:
· ಮಕ್ಕಳ ತಜ್ಞರು (ಪೀಡಿಯಾಟ್ರಿಕ್ಸ್)
· ಜನರಲ್ ಮೆಡಿಸಿನ್ ತಜ್ಞರು
· ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು
· ಮೂಳೆ ಮತ್ತು ಸಂಧ್ಯಸ್ಥಿ ತಜ್ಞರು (ಆರ್ಥೋಪೆಡಿಕ್ಸ್)
· ಶಸ್ತ್ರಚಿಕಿತ್ಸಾ ತಜ್ಞರು (ಜನರಲ್ ಸರ್ಜನ್)
ಕಾರ್ಯಕ್ರಮದಲ್ಲಿ ಮೆಡಿಕವರ್ ಆಸ್ಪತ್ರೆಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ನೀರಜ್ ಲಾಲ್, ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಅಲ್ಲದೇ ಆಸ್ಪತ್ರೆಯ ಎಲ್ಲಾ ವಿಭಾಗದ ತಜ್ಞ ವೈದ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ. ಅನಂತ್ ನಾಗ್ ಅವರಿಗೆ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಪದ್ಮಭೂಷಣ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ವಿಶೇಷ ಅಭಿನಂದನೆಗಳು ಸಲ್ಲಿಸಲಾಯಿತು. ಅವರು ತಮ್ಮ ಭಾಷಣದಲ್ಲಿ, “ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಹೆಚ್ಚಿನ ಸಮಯದಲ್ಲಿ ಲಭ್ಯವಿರುವುದು
ನಿಜವಾಗಿಯೂ ಶ್ಲಾಘನೀಯ. ಮೆಡಿಕವರ್ ಆಸ್ಪತ್ರೆಯ ಈ ಕಾರ್ಯ ಅತ್ಯಂತ ಉದಾತ್ತ ಮತ್ತು ಜನಪರ.” ಎಂದು ಹೇಳಿದರು.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…