ಮೆಡಿಕವರ್ ಆಸ್ಪತ್ರೆಯಲ್ಲಿ ಸಂಜೆ ಓಪಿಡಿ ಸೇವೆಗೆ ಡಾ. ಅನಂತ್ ನಾಗ್ ಚಾಲನೆ

ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರಿನಲ್ಲಿ ಇಂದಿನಿಂದ ಹೊಸದಾಗಿ ಪ್ರಾರಂಭಿಸಲಾದ ಸಂಜೆ ಓಪಿಡಿ ಸೇವೆಗೆ ಹಿರಿಯ ನಟ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಅನಂತ್ ನಾಗ್ ಅವರು ದೀಪ ಬೆಳಗಿ ಅಧಿಕೃತವಾಗಿ ಚಾಲನೆ ನೀಡಿದರು.

ಮೆಡಿಕವರ್ ಆಸ್ಪತ್ರೆಯಲ್ಲಿ ಈಗ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಸಂಜೆ 5 ರಿಂದ 8 ಗಂಟೆಯವರೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ಒಪಿಡಿ ಸೇವೆ ನೀಡಲಿದ್ದು, ಈ ಸೇವೆಯ ಮುಖ್ಯ ಉದ್ದೇಶವಾಗಿದ್ದು ಉದ್ಯೋಗಸ್ಥರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಹಗಲಿನಲ್ಲಿ ಆಸ್ಪತ್ರೆಗೆ ಬರುವ ಸಮಯವಿಲ್ಲದ ಸಂದರ್ಭದಲ್ಲಿ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗುತ್ತದೆ.

ಸಂಜೆ ಓಪಿಡಿಯಲ್ಲಿ ಲಭ್ಯವಿರುವ ತಜ್ಞರು:
· ಮಕ್ಕಳ ತಜ್ಞರು (ಪೀಡಿಯಾಟ್ರಿಕ್ಸ್)
· ಜನರಲ್ ಮೆಡಿಸಿನ್ ತಜ್ಞರು
· ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು
· ಮೂಳೆ ಮತ್ತು ಸಂಧ್ಯಸ್ಥಿ ತಜ್ಞರು (ಆರ್ಥೋಪೆಡಿಕ್ಸ್)
· ಶಸ್ತ್ರಚಿಕಿತ್ಸಾ ತಜ್ಞರು (ಜನರಲ್ ಸರ್ಜನ್)

ಕಾರ್ಯಕ್ರಮದಲ್ಲಿ ಮೆಡಿಕವರ್ ಆಸ್ಪತ್ರೆಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ನೀರಜ್ ಲಾಲ್, ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಅಲ್ಲದೇ ಆಸ್ಪತ್ರೆಯ ಎಲ್ಲಾ ವಿಭಾಗದ ತಜ್ಞ ವೈದ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಡಾ. ಅನಂತ್ ನಾಗ್ ಅವರಿಗೆ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಪದ್ಮಭೂಷಣ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ವಿಶೇಷ ಅಭಿನಂದನೆಗಳು ಸಲ್ಲಿಸಲಾಯಿತು. ಅವರು ತಮ್ಮ ಭಾಷಣದಲ್ಲಿ, “ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಹೆಚ್ಚಿನ ಸಮಯದಲ್ಲಿ ಲಭ್ಯವಿರುವುದು
ನಿಜವಾಗಿಯೂ ಶ್ಲಾಘನೀಯ. ಮೆಡಿಕವರ್ ಆಸ್ಪತ್ರೆಯ ಈ ಕಾರ್ಯ ಅತ್ಯಂತ ಉದಾತ್ತ ಮತ್ತು ಜನಪರ.” ಎಂದು ಹೇಳಿದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

42 minutes ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

3 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

22 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago