ಬೆಂಗಳೂರು : ಮೆಡಿಕವರ್ ಆಸ್ಪತ್ರೆ, ಬೆಂಗಳೂರಿನಲ್ಲಿ ಇಂದಿನಿಂದ ಹೊಸದಾಗಿ ಪ್ರಾರಂಭಿಸಲಾದ ಸಂಜೆ ಓಪಿಡಿ ಸೇವೆಗೆ ಹಿರಿಯ ನಟ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಅನಂತ್ ನಾಗ್ ಅವರು ದೀಪ ಬೆಳಗಿ ಅಧಿಕೃತವಾಗಿ ಚಾಲನೆ ನೀಡಿದರು.
ಮೆಡಿಕವರ್ ಆಸ್ಪತ್ರೆಯಲ್ಲಿ ಈಗ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಸಂಜೆ 5 ರಿಂದ 8 ಗಂಟೆಯವರೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ಒಪಿಡಿ ಸೇವೆ ನೀಡಲಿದ್ದು, ಈ ಸೇವೆಯ ಮುಖ್ಯ ಉದ್ದೇಶವಾಗಿದ್ದು ಉದ್ಯೋಗಸ್ಥರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಹಗಲಿನಲ್ಲಿ ಆಸ್ಪತ್ರೆಗೆ ಬರುವ ಸಮಯವಿಲ್ಲದ ಸಂದರ್ಭದಲ್ಲಿ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗುತ್ತದೆ.
ಸಂಜೆ ಓಪಿಡಿಯಲ್ಲಿ ಲಭ್ಯವಿರುವ ತಜ್ಞರು:
· ಮಕ್ಕಳ ತಜ್ಞರು (ಪೀಡಿಯಾಟ್ರಿಕ್ಸ್)
· ಜನರಲ್ ಮೆಡಿಸಿನ್ ತಜ್ಞರು
· ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು
· ಮೂಳೆ ಮತ್ತು ಸಂಧ್ಯಸ್ಥಿ ತಜ್ಞರು (ಆರ್ಥೋಪೆಡಿಕ್ಸ್)
· ಶಸ್ತ್ರಚಿಕಿತ್ಸಾ ತಜ್ಞರು (ಜನರಲ್ ಸರ್ಜನ್)
ಕಾರ್ಯಕ್ರಮದಲ್ಲಿ ಮೆಡಿಕವರ್ ಆಸ್ಪತ್ರೆಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ನೀರಜ್ ಲಾಲ್, ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಅಲ್ಲದೇ ಆಸ್ಪತ್ರೆಯ ಎಲ್ಲಾ ವಿಭಾಗದ ತಜ್ಞ ವೈದ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ. ಅನಂತ್ ನಾಗ್ ಅವರಿಗೆ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಪದ್ಮಭೂಷಣ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ವಿಶೇಷ ಅಭಿನಂದನೆಗಳು ಸಲ್ಲಿಸಲಾಯಿತು. ಅವರು ತಮ್ಮ ಭಾಷಣದಲ್ಲಿ, “ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಹೆಚ್ಚಿನ ಸಮಯದಲ್ಲಿ ಲಭ್ಯವಿರುವುದು
ನಿಜವಾಗಿಯೂ ಶ್ಲಾಘನೀಯ. ಮೆಡಿಕವರ್ ಆಸ್ಪತ್ರೆಯ ಈ ಕಾರ್ಯ ಅತ್ಯಂತ ಉದಾತ್ತ ಮತ್ತು ಜನಪರ.” ಎಂದು ಹೇಳಿದರು.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…