ಬೆಂಗಳೂರು, ವೈಟ್ ಫೀಲ್ದ್ – ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವು ಮೆಡಿಕವರ್ ಆಸ್ಪತ್ರೆ ಮುಖ್ಯಸ್ಥ ಕೃಷ್ಣಮೂರ್ತಿ, ಹಿರಿಯ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಚಿಕ್ಕಟೂರು , ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್, ಮತ್ತು ನರ್ಸೀಂಗ್ ಮುಖ್ಯಸ್ಥ ಶ್ರೀ ಕಾರ್ತಿಕ್ ಎಸ್ ಅವರ ನೇತೃತ್ವದಲ್ಲಿ ದೀಪ ಬೆಳಗಿಸುವ ಮೂಲಕ ಆರಂಭವಾಯಿತು.
ಕಾರ್ಯಕ್ರಮವನ್ನು ಸ್ವಾಗತ ನೃತ್ಯದಿಂದ ಆರಂಭಿಸಲಾಗಿದ್ದು, ನಂತರ ಶ್ರೀ ಕೃಷ್ಣಮೂರ್ತಿ ಅವರು ನರ್ಸ್ಗಳ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.
ಪ್ರತಿಭಾ ಶಾಲಿ ನರ್ಸ್ಗಳಿಗೆ ಗೌರವ ಸೂಚಿಸಲಾಯಿತು ಮತ್ತು ನರ್ಸ್ಗಳಿಗಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು.
ಯಾವಾಗ್ಲೂ ರೋಗಿಗಳ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನರ್ಸ್ ಗಳು , ತಮ್ಮ ದಿನವನ್ನು ಸಂತಸದಿಂದ ಆಚರಿಸಿದ್ರು. ಸಾಂಸ್ಕೃತಿಕ ಕಾರ್ಯಕ್ರದಲ್ಲಿ ನರ್ಸ್ಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದವು.
ಈ ವರ್ಷದ ಅಂತರಾಷ್ಟ್ರೀಯ ನರ್ಸಿಂಗ್ ದಿನದ ಥೀಮ್: “ನಮ್ಮ ನರ್ಸ್ಗಳು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ” ಎಂಬುದು ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿತು.
ಮೆಡಿಕವರ್ ಆಸ್ಪತ್ರೆಯು ಪ್ರತಿದಿನವೂ ರೋಗಿಗಳ ಆರೈಕೆಯಲ್ಲಿ ಮುಖ್ಯಭಾಗವಹಿಸುತ್ತಿರುವ ನರ್ಸ್ಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…