ಬೆಂಗಳೂರು, ವೈಟ್ ಫೀಲ್ದ್ – ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವು ಮೆಡಿಕವರ್ ಆಸ್ಪತ್ರೆ ಮುಖ್ಯಸ್ಥ ಕೃಷ್ಣಮೂರ್ತಿ, ಹಿರಿಯ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಚಿಕ್ಕಟೂರು , ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್, ಮತ್ತು ನರ್ಸೀಂಗ್ ಮುಖ್ಯಸ್ಥ ಶ್ರೀ ಕಾರ್ತಿಕ್ ಎಸ್ ಅವರ ನೇತೃತ್ವದಲ್ಲಿ ದೀಪ ಬೆಳಗಿಸುವ ಮೂಲಕ ಆರಂಭವಾಯಿತು.
ಕಾರ್ಯಕ್ರಮವನ್ನು ಸ್ವಾಗತ ನೃತ್ಯದಿಂದ ಆರಂಭಿಸಲಾಗಿದ್ದು, ನಂತರ ಶ್ರೀ ಕೃಷ್ಣಮೂರ್ತಿ ಅವರು ನರ್ಸ್ಗಳ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.
ಪ್ರತಿಭಾ ಶಾಲಿ ನರ್ಸ್ಗಳಿಗೆ ಗೌರವ ಸೂಚಿಸಲಾಯಿತು ಮತ್ತು ನರ್ಸ್ಗಳಿಗಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು.
ಯಾವಾಗ್ಲೂ ರೋಗಿಗಳ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನರ್ಸ್ ಗಳು , ತಮ್ಮ ದಿನವನ್ನು ಸಂತಸದಿಂದ ಆಚರಿಸಿದ್ರು. ಸಾಂಸ್ಕೃತಿಕ ಕಾರ್ಯಕ್ರದಲ್ಲಿ ನರ್ಸ್ಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದವು.
ಈ ವರ್ಷದ ಅಂತರಾಷ್ಟ್ರೀಯ ನರ್ಸಿಂಗ್ ದಿನದ ಥೀಮ್: “ನಮ್ಮ ನರ್ಸ್ಗಳು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ” ಎಂಬುದು ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿತು.
ಮೆಡಿಕವರ್ ಆಸ್ಪತ್ರೆಯು ಪ್ರತಿದಿನವೂ ರೋಗಿಗಳ ಆರೈಕೆಯಲ್ಲಿ ಮುಖ್ಯಭಾಗವಹಿಸುತ್ತಿರುವ ನರ್ಸ್ಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದೆ.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…