ಬೆಂಗಳೂರು, ವೈಟ್ ಫೀಲ್ದ್ – ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವು ಮೆಡಿಕವರ್ ಆಸ್ಪತ್ರೆ ಮುಖ್ಯಸ್ಥ ಕೃಷ್ಣಮೂರ್ತಿ, ಹಿರಿಯ ಹೃದ್ರೋಗ ತಜ್ಞ ಡಾ. ರಾಘವೇಂದ್ರ ಚಿಕ್ಕಟೂರು , ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್, ಮತ್ತು ನರ್ಸೀಂಗ್ ಮುಖ್ಯಸ್ಥ ಶ್ರೀ ಕಾರ್ತಿಕ್ ಎಸ್ ಅವರ ನೇತೃತ್ವದಲ್ಲಿ ದೀಪ ಬೆಳಗಿಸುವ ಮೂಲಕ ಆರಂಭವಾಯಿತು.
ಕಾರ್ಯಕ್ರಮವನ್ನು ಸ್ವಾಗತ ನೃತ್ಯದಿಂದ ಆರಂಭಿಸಲಾಗಿದ್ದು, ನಂತರ ಶ್ರೀ ಕೃಷ್ಣಮೂರ್ತಿ ಅವರು ನರ್ಸ್ಗಳ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.
ಪ್ರತಿಭಾ ಶಾಲಿ ನರ್ಸ್ಗಳಿಗೆ ಗೌರವ ಸೂಚಿಸಲಾಯಿತು ಮತ್ತು ನರ್ಸ್ಗಳಿಗಾಗಿ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನೂ ನೀಡಲಾಯಿತು.
ಯಾವಾಗ್ಲೂ ರೋಗಿಗಳ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನರ್ಸ್ ಗಳು , ತಮ್ಮ ದಿನವನ್ನು ಸಂತಸದಿಂದ ಆಚರಿಸಿದ್ರು. ಸಾಂಸ್ಕೃತಿಕ ಕಾರ್ಯಕ್ರದಲ್ಲಿ ನರ್ಸ್ಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದವು.
ಈ ವರ್ಷದ ಅಂತರಾಷ್ಟ್ರೀಯ ನರ್ಸಿಂಗ್ ದಿನದ ಥೀಮ್: “ನಮ್ಮ ನರ್ಸ್ಗಳು. ನಮ್ಮ ಭವಿಷ್ಯ. ಆರೈಕೆಯ ಆರ್ಥಿಕ ಶಕ್ತಿ” ಎಂಬುದು ಕಾರ್ಯಕ್ರಮದ ಹಿರಿಮೆಯನ್ನು ಹೆಚ್ಚಿಸಿತು.
ಮೆಡಿಕವರ್ ಆಸ್ಪತ್ರೆಯು ಪ್ರತಿದಿನವೂ ರೋಗಿಗಳ ಆರೈಕೆಯಲ್ಲಿ ಮುಖ್ಯಭಾಗವಹಿಸುತ್ತಿರುವ ನರ್ಸ್ಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…