ಬೆಂಗಳೂರು, ಜೂನ್ 21: ಬೆಂಗಳೂರಿನ ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಯೋಗಗುರು ಡಾ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವೈದ್ಯರು, ನರ್ಸ್ಗಳು ಮತ್ತು ಸಿಬ್ಬಂದಿ ವರ್ಗ ಯೋಗ ಅಭ್ಯಾಸದಲ್ಲಿ ಭಾಗವಹಿಸಿದರು.
ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು ಹಾಗೂ ಎಲ್ಲಾ ವಿಭಾಗಗಳ ಸಿಬ್ಬಂದಿಯೊಂದಿಗೆ ಯೋಗದಲ್ಲಿ ಭಾಗವಹಿಸಿದರು.
ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಪ್ರಚಾರ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕೃಷ್ಣಮೂರ್ತಿ, “ಯೋಗ ಕೇವಲ ವ್ಯಾಯಾಮವಲ್ಲ; ಇದು ಮನಸ್ಸು, ದೇಹ ಹಾಗೂ ಆತ್ಮದ ಸಮನ್ವಯವಾಗಿರುವ ದಾರಿಯಾಗಿದೆ. ಮೆಡಿಕವರ್ ಆಸ್ಪತ್ರೆ ಸಮಗ್ರ ಆರೋಗ್ಯ ಸೇವೆಗೆ ಬದ್ಧವಾಗಿದೆ, ಈ ಕಾರ್ಯಕ್ರಮ ಅದನ್ನು ಪ್ರತಿಬಿಂಬಿಸುತ್ತದೆ” ಎಂದರು.
ಆಸ್ಪತ್ರೆಯ ಎಲ್ಲಾ ಸಿಬ್ಬಂದಿಯು ಯೋಗದಲ್ಲಿ ಭಾಗವಹಿಸಿ, ಶಾಂತಿಯುತ ವಾತಾವರಣವನ್ನು ಸೃಷ್ಟಿಸಿದರು ಮತ್ತು ಸಮೂಹ ಮನೋಭಾವವನ್ನು ಮೆರೆದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…