ಬೆಂಗಳೂರು, ವೈಟ್ಫೀಲ್ಡ್, : ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.
ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.
ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.
ರೋಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್ ಕಟ್ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…