ಬೆಂಗಳೂರು, ವೈಟ್ಫೀಲ್ಡ್, : ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.
ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.
ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.
ರೋಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್ ಕಟ್ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…