ಬೆಂಗಳೂರು, ವೈಟ್ಫೀಲ್ಡ್, : ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.
ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.
ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.
ರೋಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್ ಕಟ್ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…