ಬೆಂಗಳೂರು, ವೈಟ್ಫೀಲ್ಡ್, : ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.
ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.
ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.
ರೋಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್ ಕಟ್ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…