ಬೆಂಗಳೂರು, ವೈಟ್ಫೀಲ್ಡ್, : ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯ ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ಘಟಕವು ಕೇವಲ 5 ತಿಂಗಳಲ್ಲಿ 100ಕ್ಕೂ ಹೆಚ್ಚು ಯಶಸ್ವಿ ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿ, ತಂತ್ರಜ್ಞಾನ ಮತ್ತು ರೋಗಿ ಕೇಂದ್ರೀಕೃತ ಚಿಕಿತ್ಸೆಯ ಹೊಸ ಮಾನದಂಡ ಸ್ಥಾಪಿಸಿದೆ.
ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಗೈನಿಕಾಲಜಿ ಮತ್ತು ಜೀರ್ಣಾಂಗ ಶಾಸ್ತ್ರ ಕ್ಷೇತ್ರಗಳಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಗಳಿಂದ ರೋಗಿಗಳ ಚೇತರಿಕೆಯ ಅವಧಿ, ನೋವು ಮತ್ತು ಆಸ್ಪತ್ರೆಯಲ್ಲಿ ಉಳಿಯುವ ಅವಧಿ ತುಂಬಾ ಕಡಿಮೆಯಾಗಿದೆ.
ಆಸ್ಪತ್ರೆಯ ಮುಖ್ಯಸ್ಥ ಕೃಷ್ಣಮೂರ್ತಿ ನಾವು ಶಸ್ತ್ರಚಿಕಿತ್ಸೆಗಳನ್ನು ಸುರಕ್ಷಿತವಾಗಿ, ಸುಲಭವಾಗಿ ಮತ್ತು ಬೇಗನೆ ಮಾಡಿಸಲು ನಾವು ತಂತ್ರಜ್ಞಾನವನ್ನು ಬಳಸುತ್ತೇವೆ.ತಂತ್ರಜ್ಞಾನದಿಂದ ನಾವು ಕಡಿಮೆ ನೋವಿನಲ್ಲಿ, ಬೇಗ ಚೇತರಿಸಿಕೊಳ್ಳುವ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬಹುದು ಎಂದು ತಿಳಿಸಿದರು.
ರೋಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ನಡೆದ ಪ್ರಮುಖ ವೈದ್ಯರುಗಳಾದ ಡಾ. ಪ್ರಮೋದ್ – ಮೂತ್ರಶಾಸ್ತ್ರಜ್ಞ, ಡಾ. ಜಾವೆದ್ ಹುಸೇನ್ – ಸಾಮಾನ್ಯ ಶಸ್ತ್ರಚಿಕಿತ್ಸೆ, ಡಾ. ಕೌಶಿಕ್ ಸುಬ್ರಮಣಿಯನ್ – ಜೀರ್ಣಾಂಗ ಶಾಸ್ತ್ರಜ್ಞ, ಡಾ. ಮಾನಸಾ ರೆಡ್ಡಿ, ಡಾ. ಸಬಿಹಾ , ಡಾ. ಸಂಸ್ಕೃತಿ ರೆಡ್ಡಿ – ಗೈನಿಕಾಲಜಿ , ಪ್ರಮೋದ್ ಯು – ಮಾರ್ಕೆಟಿಂಗ್ ಮುಖ್ಯಸ್ಥ , ಸಂಪೂರ್ಣ ಮಾರ್ಕೆಟಿಂಗ್ ತಂಡ ಮತ್ತು OT ಸಿಬ್ಬಂದಿಗಳು ಭಾಗಿಯಾಗಿದ್ದರು . ಕೇಕ್ ಕಟ್ ಮಾಡುವುದರ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…