ಮೆಡಿಕವರ್ ಆಸ್ಪತ್ರೆಯಲ್ಲಿ 90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ತಜ್ಞ ವೈದ್ಯರು

ವೈಟ್‌ ಫಿಲ್ದ್‌: ಜಾರಿ ಬಿದ್ದು ಪ್ರಜ್ಞೆಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯು ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್‌ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು .

90 ವರ್ಷದ ವೃದ್ದ, ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಏಕಾಏಕಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು . ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ . ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ . ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್‌ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.

ಅದರಂತೆ ಅವರನ್ನು ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು . ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್‌ ನಡೆಸಿದರೇ ರಕ್ತ ಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು, ಅಲ್ಲದೇ ಡಯಾಬೀಟಿಸ್‌ , ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್‌ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್‌ ಮಾಡಲಾಯ್ತು. ಸಿಟಿ ಸ್ಕ್ಯಾನ್‌ ಮಾಡಿದ ಬಳಿಕ ಸಬ್‌ ಡ್ಯುರಲ್‌ ಹೆಮಾಟೋಮಾ ಮಿಡ್‌ಲೈನ್‌ ಶಿಫ್ಟ್‌ ಮತ್ತು ಆಂಕಲ್‌ ಹೆರ್ನಿಯೇಷನ್‌ ಆಗಿರೋದು ಎಂದು ಬೆಳಕಿಗೆ ಬಂದಿದೆ.

ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್-‌ ಹೋಲ್‌ ಎವಾಕ್ಯುಯೇಶನ್‌ ಶಸ್ತ್ರಚಿಕಿತ್ಸೆಯನ್ನು ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್‌ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್‌ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು , ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

9 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago