ಮೆಡಿಕವರ್ ಆಸ್ಪತ್ರೆಯಲ್ಲಿ 90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ತಜ್ಞ ವೈದ್ಯರು

ವೈಟ್‌ ಫಿಲ್ದ್‌: ಜಾರಿ ಬಿದ್ದು ಪ್ರಜ್ಞೆಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯು ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್‌ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು .

90 ವರ್ಷದ ವೃದ್ದ, ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಏಕಾಏಕಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು . ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ . ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ . ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್‌ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.

ಅದರಂತೆ ಅವರನ್ನು ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು . ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್‌ ನಡೆಸಿದರೇ ರಕ್ತ ಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು, ಅಲ್ಲದೇ ಡಯಾಬೀಟಿಸ್‌ , ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್‌ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್‌ ಮಾಡಲಾಯ್ತು. ಸಿಟಿ ಸ್ಕ್ಯಾನ್‌ ಮಾಡಿದ ಬಳಿಕ ಸಬ್‌ ಡ್ಯುರಲ್‌ ಹೆಮಾಟೋಮಾ ಮಿಡ್‌ಲೈನ್‌ ಶಿಫ್ಟ್‌ ಮತ್ತು ಆಂಕಲ್‌ ಹೆರ್ನಿಯೇಷನ್‌ ಆಗಿರೋದು ಎಂದು ಬೆಳಕಿಗೆ ಬಂದಿದೆ.

ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್-‌ ಹೋಲ್‌ ಎವಾಕ್ಯುಯೇಶನ್‌ ಶಸ್ತ್ರಚಿಕಿತ್ಸೆಯನ್ನು ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್‌ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್‌ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು , ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

2 hours ago

ಸಿಂಗ್ರಹಳ್ಳಿ ಗ್ರಾಮದ ಗೋಮಾಳ ಜಮೀನು ಉಳ್ಳವರಿಂದಲೇ ಒತ್ತುವರಿ- ಮುನಿಆಂಜಿನಪ್ಪ ಆರೋಪ

ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…

4 hours ago

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

15 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಸ್ಥಳ ಮಹಜರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಇಂಚಿಂಚು ಮಾಹಿತಿ ನೀಡಿದ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…

18 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…

19 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…

20 hours ago