ವೈಟ್ ಫಿಲ್ದ್: ಜಾರಿ ಬಿದ್ದು ಪ್ರಜ್ಞೆಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯು ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು .
90 ವರ್ಷದ ವೃದ್ದ, ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಏಕಾಏಕಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು . ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ . ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ . ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.
ಅದರಂತೆ ಅವರನ್ನು ಮೆಡಿಕವರ್ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು . ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್ ನಡೆಸಿದರೇ ರಕ್ತ ಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು, ಅಲ್ಲದೇ ಡಯಾಬೀಟಿಸ್ , ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್ ಮಾಡಲಾಯ್ತು. ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಸಬ್ ಡ್ಯುರಲ್ ಹೆಮಾಟೋಮಾ ಮಿಡ್ಲೈನ್ ಶಿಫ್ಟ್ ಮತ್ತು ಆಂಕಲ್ ಹೆರ್ನಿಯೇಷನ್ ಆಗಿರೋದು ಎಂದು ಬೆಳಕಿಗೆ ಬಂದಿದೆ.
ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್- ಹೋಲ್ ಎವಾಕ್ಯುಯೇಶನ್ ಶಸ್ತ್ರಚಿಕಿತ್ಸೆಯನ್ನು ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು , ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…