ಮೆಡಿಕವರ್ ಆಸ್ಪತ್ರೆಯಲ್ಲಿ 90 ವರ್ಷದ ವೃದ್ಧನಿಗೆ ಮರು ಜೀವ ನೀಡಿದ ತಜ್ಞ ವೈದ್ಯರು

ವೈಟ್‌ ಫಿಲ್ದ್‌: ಜಾರಿ ಬಿದ್ದು ಪ್ರಜ್ಞೆಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯು ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್‌ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು .

90 ವರ್ಷದ ವೃದ್ದ, ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಏಕಾಏಕಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು . ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ . ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ . ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್‌ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್‌ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.

ಅದರಂತೆ ಅವರನ್ನು ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು . ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್‌ ನಡೆಸಿದರೇ ರಕ್ತ ಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು, ಅಲ್ಲದೇ ಡಯಾಬೀಟಿಸ್‌ , ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್‌ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್‌ ಮಾಡಲಾಯ್ತು. ಸಿಟಿ ಸ್ಕ್ಯಾನ್‌ ಮಾಡಿದ ಬಳಿಕ ಸಬ್‌ ಡ್ಯುರಲ್‌ ಹೆಮಾಟೋಮಾ ಮಿಡ್‌ಲೈನ್‌ ಶಿಫ್ಟ್‌ ಮತ್ತು ಆಂಕಲ್‌ ಹೆರ್ನಿಯೇಷನ್‌ ಆಗಿರೋದು ಎಂದು ಬೆಳಕಿಗೆ ಬಂದಿದೆ.

ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್-‌ ಹೋಲ್‌ ಎವಾಕ್ಯುಯೇಶನ್‌ ಶಸ್ತ್ರಚಿಕಿತ್ಸೆಯನ್ನು ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್‌ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್‌ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು , ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

3 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

8 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago