ವೈಟ್ ಫಿಲ್ದ್: ಜಾರಿ ಬಿದ್ದು ಪ್ರಜ್ಞೆಹೀನಾ ಸ್ಥಿತಿಯಲ್ಲಿದ್ದ ವೃದ್ದನ ಸ್ಥಿತಿಯನ್ನು ಕಂಡು ಅವರ ಮನೆಯವರು ರೋಗಿಯು ಬದುಕುಳಿಯುವ ಭರವಸೆಯನ್ನೆ ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಕ ವೈದ್ಯ ಡಾ. ದೀಪಕ್ರವರ ನೇತ್ರತ್ವದಲ್ಲಿ ನಡೆದ ಚಿಕಿತ್ಸೆಯಲ್ಲಿ ಎಂದಿಗಿಂತಲೂ ಹುಷಾರಾಗಿ ಓಡಾಡೋಕೆ ಶುರು ಮಾಡಿದ್ರು .
90 ವರ್ಷದ ವೃದ್ದ, ತಿಂಗಳ ಹಿಂದೆ ಜಾರಿ ಬಿದ್ದಿದ್ದರು. ಜಾರಿ ಬಿದ್ದ ಬಳಿಕ ಸ್ವಲ್ಪ ಸಮಯ ಪ್ರಜ್ಞಾ ಹೀನಾ ಸ್ಥಿತಿಯಲ್ಲಿದ್ದರು, ಆದಾದ ಮೇಲೆ ಆರಾಮವಾಗಿದ್ದರು. ಆದರೆ ಪದೇ ಪದೇ ತಲೆನೋವು ಹಾಗೂ ತಲೆ ಸುತ್ತು ಬರುತ್ತಾ ಇತ್ತು ಹಾಗೂ ಏಕಾಏಕಿ ಮತ್ತೆ ಪ್ರಜ್ಞಾಹೀನಾ ಸ್ಥಿತಿಗೆ ಬಂದರು . ಎಷ್ಟು ಪ್ರಯತ್ನ ಪಟ್ಟರು ಪ್ರಜ್ಞೆ ಬರಲಿಲ್ಲ . ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರೂ, ಯಾವುದೇ ಪ್ರಯೋಜನವಾಗಿಲ್ಲ . ಮನೆಯವರು ಸಂಪೂರ್ಣವಾಗಿ ಅವರು ಬದುಕುಳಿಯುವ ಭರವಸೆಯನ್ನು ಕಳೆದುಕೊಂಡಿದ್ದರು. ಆದ್ರೆ ಮೆಡಿಕವರ್ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬಂದ ಬಳಿಕ ಡಾ. ದೀಪಕ್ ಅವರಿಗೆ ಮತ್ತೆ ಮರು ಜೀವ ನೀಡುವ ಭರವಸೆಯನ್ನು ಕೊಟ್ಟರು.
ಅದರಂತೆ ಅವರನ್ನು ಮೆಡಿಕವರ್ ಆಸ್ಪತ್ರೆಯಲ್ಲಿ ದಾಖಲಾಗಿಸಲಾಯಿತು . ರೋಗಿಗೆ 90 ವರ್ಷವಾಗಿದ್ದ ಕಾರಣ ಯಾವುದೇ ಚಿಕಿತ್ಸೆಯನ್ನು ನಡೆಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಯಾಕೆಂದ್ರೆ ಅವರ ರಕ್ತ ಸಂಪೂರ್ಣವಾಗಿ ತೆಳುವಾಗಿದ್ದ ಕಾರಣ, ಅಪರೇಷನ್ ನಡೆಸಿದರೇ ರಕ್ತ ಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತಾ ಇತ್ತು, ಅಲ್ಲದೇ ಡಯಾಬೀಟಿಸ್ , ರಕ್ತದೊತ್ತಡ ಹಾಗೂ ಶ್ವಾಸಕೋಶದ ಸೋಂಕು ಕೂಡ ಆಗಿತ್ತು. ಹಾಗಾಗೀ ಅದಕ್ಕೆ ಸೂಕ್ತ ಟ್ರಿಂಟೆಮೆಂಟ್ ನೀಡಿ, ಎರಡು ದಿನ ಕಾದು ಬಳಿಕ ಸಿಟಿ ಸ್ಕ್ಯಾನ್ ಮಾಡಲಾಯ್ತು. ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಸಬ್ ಡ್ಯುರಲ್ ಹೆಮಾಟೋಮಾ ಮಿಡ್ಲೈನ್ ಶಿಫ್ಟ್ ಮತ್ತು ಆಂಕಲ್ ಹೆರ್ನಿಯೇಷನ್ ಆಗಿರೋದು ಎಂದು ಬೆಳಕಿಗೆ ಬಂದಿದೆ.
ಅವರ ಸಮಸ್ಯೆ ಬೆಳಕಿಗೆ ಬಂದ ಬಳಿಕ ತಡಮಾಡದೇ, ಬರ್- ಹೋಲ್ ಎವಾಕ್ಯುಯೇಶನ್ ಶಸ್ತ್ರಚಿಕಿತ್ಸೆಯನ್ನು ಯಶ್ವಸಿಯಾಗಿ ಮಾಡಲಾಯಿತು. ಇದು ಕೀ ಹೋಲ್ ಸರ್ಜರಿಯಾಗಿದ್ದು, ಸಣ್ಣ ರಂಧ್ರ ಮಾಡಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಕೀ ಹೋಲ್ ಸರ್ಜರಿಯಲ್ಲಿ ರಿಕವರಿ ಸ್ವಲ್ಪ ಬೇಗ ಇರುತ್ತದೆ ಹಾಗೂ ನೋವು ಕೂಡ ಕಡಿಮೆ ಇರುತ್ತದೆ. 45 ನಿಮಿಷ ಶಸ್ತ್ರ ಚಿಕಿತ್ಸೆ ನಡೆಸಲಾಯ್ತು , ಚಿಕಿತ್ಸೆ ನಡೆದು 6 ಗಂಟೆಯ ಬಳಿಕ ರೋಗಿಯೂ ಬಹುತೇಕ ಚೇತರಿಸಿಕೊಂಡಿದ್ದಾರೆ. ರೋಗಿಯ ಪ್ರಾಣ ಉಳಿಸುವಲ್ಲಿ ತ್ವರಿತ ನಿರ್ಧಾರ ಮತ್ತು ತಜ್ಞ ವೈದ್ಯರ ಕೌಶಲ್ಯ ಪ್ರಮುಖ ಪಾತ್ರ ವಹಿಸಿತು ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…