ಬೆಂಗಳೂರು,ವೈಟ್ ಫೀಲ್ಡ್ : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವತಿಯಿಂದ ವೈದ್ಯರು ಮತ್ತು ನರ್ಸ್ ಗಳಿಗಾಗಿ ನವಜಾತ ಶಿಶು ಪುನಶ್ಚೇತನ ಕಾರ್ಯಕ್ರಮವನ್ನು (Basic NRP) ಯಶಸ್ವಿಯಾಗಿ ಆಯೋಜಿಸಲಾಯಿತು. ಈ ತರಬೇತಿ ಕಾರ್ಯಕ್ರಮವು ವೈದ್ಯಕೀಯ ವೃತ್ತಿಪರರಲ್ಲಿ ಜೀವ ರಕ್ಷಣಾ ಕೌಶಲ್ಯಗಳನ್ನು ವೃದ್ಧಿಸಲು, ಹಾಗೂ ನವಜಾತ ಶಿಶುಗಳ ಉತ್ತಮ ಆರೈಕೆಗಾಗಿ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲು ರೂಪಗೊಳಿಸಲಾಗಿದೆ.
ಈ ಕಾರ್ಯಕ್ರಮವನ್ನು ಮಕ್ಕಳ ವೈದ್ಯರಾದ ಡಾ. ಸಂಜೀವ ರೆಡ್ಡಿ, ಡಾ. ಲೀನಾತ ರೆಡ್ಡಿ, ಡಾ. ಅನುರಾಗ್ ಮಹಾಗಾಂಕಾರ ಹಾಗೂ ಮೆಡಿಕವರ್ ಆಸ್ಪತ್ರೆಯ AGM ಮೊಹಿತ್ ಅವರು ಉದ್ಘಾಟಿಸಿದರು.
ಬೇಸಿಕ್ ಎನ್ಆರ್ಪಿ ತರಬೇತಿ, ಜನನ ಕ್ಷಣದಲ್ಲೇ ಉದ್ಭವಿಸಬಹುದಾದ ತುರ್ತು ಪರಿಸ್ಥಿತಿಗಳಿಗೆ ತ್ವರಿತ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ನೀಡಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ವೈದ್ಯರು ಹಾಗೂ ನರ್ಸುಗಳಿಗೆ ಒದಗಿಸುತ್ತದೆ. ಹೊಸಜಾತ ಶಿಶುಗಳ ಜೀವ ಉಳಿಸುವ ಉನ್ನತ ತಂತ್ರಗಳನ್ನು ಕಲಿಸುವ ಮೂಲಕ, ಮೆಡಿಕವರ್ ಆಸ್ಪತ್ರೆ ನವಜಾತ ಶಿಶುಗಳ ಉತ್ತಮ ಫಲಿತಾಂಶ ಮತ್ತು ಸುರಕ್ಷಿತ ಆರೈಕೆಗೆ ತನ್ನ ಬದ್ಧತೆಯನ್ನು ಮುಂದುವರೆಸುತ್ತಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…