ಬೆಂಗಳೂರು,ವೈಟ್ ಫೀಲ್ಡ್ : ಮೆಡಿಕವರ್ ಆಸ್ಪತ್ರೆ, ಬೆಂಗಳೂರು ವತಿಯಿಂದ ವೈದ್ಯರು ಮತ್ತು ನರ್ಸ್ ಗಳಿಗಾಗಿ ನವಜಾತ ಶಿಶು ಪುನಶ್ಚೇತನ ಕಾರ್ಯಕ್ರಮವನ್ನು (Basic NRP) ಯಶಸ್ವಿಯಾಗಿ ಆಯೋಜಿಸಲಾಯಿತು. ಈ ತರಬೇತಿ ಕಾರ್ಯಕ್ರಮವು ವೈದ್ಯಕೀಯ ವೃತ್ತಿಪರರಲ್ಲಿ ಜೀವ ರಕ್ಷಣಾ ಕೌಶಲ್ಯಗಳನ್ನು ವೃದ್ಧಿಸಲು, ಹಾಗೂ ನವಜಾತ ಶಿಶುಗಳ ಉತ್ತಮ ಆರೈಕೆಗಾಗಿ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲು ರೂಪಗೊಳಿಸಲಾಗಿದೆ.
ಈ ಕಾರ್ಯಕ್ರಮವನ್ನು ಮಕ್ಕಳ ವೈದ್ಯರಾದ ಡಾ. ಸಂಜೀವ ರೆಡ್ಡಿ, ಡಾ. ಲೀನಾತ ರೆಡ್ಡಿ, ಡಾ. ಅನುರಾಗ್ ಮಹಾಗಾಂಕಾರ ಹಾಗೂ ಮೆಡಿಕವರ್ ಆಸ್ಪತ್ರೆಯ AGM ಮೊಹಿತ್ ಅವರು ಉದ್ಘಾಟಿಸಿದರು.
ಬೇಸಿಕ್ ಎನ್ಆರ್ಪಿ ತರಬೇತಿ, ಜನನ ಕ್ಷಣದಲ್ಲೇ ಉದ್ಭವಿಸಬಹುದಾದ ತುರ್ತು ಪರಿಸ್ಥಿತಿಗಳಿಗೆ ತ್ವರಿತ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ನೀಡಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ವೈದ್ಯರು ಹಾಗೂ ನರ್ಸುಗಳಿಗೆ ಒದಗಿಸುತ್ತದೆ. ಹೊಸಜಾತ ಶಿಶುಗಳ ಜೀವ ಉಳಿಸುವ ಉನ್ನತ ತಂತ್ರಗಳನ್ನು ಕಲಿಸುವ ಮೂಲಕ, ಮೆಡಿಕವರ್ ಆಸ್ಪತ್ರೆ ನವಜಾತ ಶಿಶುಗಳ ಉತ್ತಮ ಫಲಿತಾಂಶ ಮತ್ತು ಸುರಕ್ಷಿತ ಆರೈಕೆಗೆ ತನ್ನ ಬದ್ಧತೆಯನ್ನು ಮುಂದುವರೆಸುತ್ತಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…