ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ, ಹಾಗೂ ಬಸ್ ಚಾಲಕರಿಗೆ ‌ ಜೀವ ರಕ್ಷಣೆ ತರಬೇತಿಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಮೆಡಿಕವರ್‌ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ. ಕುಶಾಲ್ ಅವರ ನೇತೃತ್ವದಲ್ಲಿ ನಡೆಸಲಾದ ಈ ತರಬೇತಿಯಲ್ಲಿ, CPR , First Aid, ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸುವ ತಂತ್ರಗಳನ್ನು ಮಕ್ಕಳಿಗೆ ಕಲಿಸಲಾಯಿತು. 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ ಈ ಕಾರ್ಯಕ್ರಮವು, ಪ್ರಾಯೋಗಿಕವಾಗಿ ನಡೆಯಿತು.

ಶಾಲೆಯ ವೈಸ್‌ ಪ್ರಿನ್ಸಿಪಾಲ್‌ ಕವಿತಾ ಅವರು ಮಾತನಾಡಿ, ಈ ರೀತಿಯ ತರಬೇತಿ ಶಾಲಾ ಮಕ್ಕಳಿಗೆ ಹಾಗೂ ಸಿಬ್ಬಂದಿಗೆ ತುರ್ತು ಸಮಯದಲ್ಲಿ ಆತ್ಮವಿಶ್ವಾಸದಿಂದ ನಿಲ್ಲಲು ಸಹಾಯಮಾಡುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಈ ಪ್ರಚೋದನೆಗೆ ಕೃತಜ್ಞತೆ ಸಲ್ಲಿಸಿದರು.

ಈ ತರಬೇತಿಗಳು ಸಮುದಾಯದ ವೈದ್ಯಕೀಯ ತುರ್ತು ಪರಿಸ್ಥಿತಿಗಳ ವಿರುದ್ಧ ಸಮರ್ಪಕ ಪ್ರತಿಕ್ರಿಯೆ ನೀಡಲು ಸಜ್ಜು ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

8 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

10 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

10 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

11 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

13 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

18 hours ago