ಬೆಂಗಳೂರು, ವೈಟ್ ಫೀಲ್ದ್ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.
ಆರ್ಥೋ ವಿಂಗ್ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್ ವಿಭಾದ ಮುಖ್ಯಸ್ಥ ಪ್ರಮೋದ್ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್ ಡಿ ಚಕ್ರವರ್ತಿ, ಸಂಜಯ್ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.
ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಹೇಳಿದರು: “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ.”
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…