ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು, ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.

ಆರ್ಥೋ ವಿಂಗ್‌ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್‌ ವಿಭಾದ ಮುಖ್ಯಸ್ಥ ಪ್ರಮೋದ್‌ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್‌ ಡಿ ಚಕ್ರವರ್ತಿ, ಸಂಜಯ್‌ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್‌ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.

ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಹೇಳಿದರು: “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ.”
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago