ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು, ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.

ಆರ್ಥೋ ವಿಂಗ್‌ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್‌ ವಿಭಾದ ಮುಖ್ಯಸ್ಥ ಪ್ರಮೋದ್‌ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್‌ ಡಿ ಚಕ್ರವರ್ತಿ, ಸಂಜಯ್‌ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್‌ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.

ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಹೇಳಿದರು: “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ.”
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

7 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

17 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

18 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago