ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ

ಬೆಂಗಳೂರು, ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವಾಗಿ ಉದ್ಘಾಟಿಸಲಾಯಿತು. ನೂತನ ಕೇಂದ್ರವು ಸಂಯೋಜಿತ ರೋಬೊಟಿಕ್ ಶಸ್ತ್ರಚಿಕಿತ್ಸಾ ತಂತ್ರಜ್ಞಾನವನ್ನು ಪರಿಚಯಿಸಿ, ಮೂಳೆ-ಸಂಧಿ ಚಿಕಿತ್ಸೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.

ಆರ್ಥೋ ವಿಂಗ್‌ನ ನಡೆದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಜಿ, ಮಾರ್ಕೆಟಿಂಗ್‌ ವಿಭಾದ ಮುಖ್ಯಸ್ಥ ಪ್ರಮೋದ್‌ ಯು, ಆಸ್ಪತ್ರೆಯ ಹಿರಿಯ ಮೂಳೆ ತಜ್ಞರಾದ ಆರ್‌ ಡಿ ಚಕ್ರವರ್ತಿ, ಸಂಜಯ್‌ ಹೆಗಡೆ, ರವೀಂದ್ರ ಪುಟ್ಟಸ್ವಾಮಯ್ಯ, ಕೃಷ್ಣಕುಮಾರ್‌ ಹಾಗೂ ರಾಘವೇಂದ್ರ ರೆಡ್ಡಿಯವರು ಭಾಗವಹಿಸಿ ಕೇಂದ್ರವನ್ನು ಉದ್ಘಾಟಿಸಿದರು. ಈ ಮೂಲಕ ಹೆಚ್ಚು ನಿಖರತೆ, ಕಡಿಮೆ ಪುನಶ್ಚೇತನ ಸಮಯ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆ ಫಲಿತಾಂಶಗಳನ್ನು ಸಾಧಿಸುವ ಉದ್ದೇಶವಿದೆ.

ಮೆಡಿಕವರ್ ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಹೇಳಿದರು: “ಈ ರೋಬೊಟಿಕ್ ತಂತ್ರಜ್ಞಾನದಿಂದ ನಾವು ಹೆಚ್ಚು ನಿಖರವಾದ ಶಸ್ತ್ರಚಿಕಿತ್ಸೆ ನಡೆಸಬಹುದು. ಇದು ನೂರಾರು ಸಂಧಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಆಶಾದಾಯಕವಾಗಿದೆ.”
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗಿಯಾಗಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

3 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

17 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

18 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

19 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

19 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

23 hours ago