ಮೆಳೆಕೋಟೆ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಬ್ರಹ್ಮರಥೋತ್ಸವ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಿನ್ನೆ ಶ್ರೀರಾಮ ನವಮಿ ಹಬ್ಬ ಆಚರಣೆ ಮಾಡಿ, ಹಬ್ಬದ ಪ್ರಯುಕ್ತ ಇಂದು ಶ್ರೀರಾಮ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು.

ಬ್ರಹ್ಮರಥೋತ್ಸವ ಅಂಗವಾಗಿ ದೇವರಿಗೆ ವಿಶೇಷವಾಗಿ ಅಲಂಕರಿಸಿ ವಿವಿಧ ಪೂಜಾ ಕಾರ್ಯಗಳನ್ನು ಮಾಡಲಾಯಿತು.

ಬ್ರಹ್ಮರಥೋತ್ಸವಕ್ಕೆ ತಾಲೂಕಿನ ಅಕ್ಕಪಕ್ಕದ ಗ್ರಾಮಗಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ತಮ್ಮ ಇಷ್ಟಾರ್ಥ ಸೇವೆ, ಬೇಡಿಕೆಗಳನ್ನು ಈಡೇರಿಸಿಕೊಂಡ ಭಕ್ತಾಧಿಗಳು. ನಂತರ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ವಿತರಸಿಲಾಯಿತು.

ಇಂದು ಸಂಜೆ ಪೌರಾಣಿಕ ನಾಟಕ ಏರ್ಪಡಿಸಲಾಗಿತ್ತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕ ಪ್ರದರ್ಶನವನ್ನು ಕಣ್ತುಂಬಿಕೊಂಡರು.

Leave a Reply

Your email address will not be published. Required fields are marked *