ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಶ್ರೀನಿವಾಸಮೂರ್ತಿ ಮತ್ತು ಭಾಗ್ಯಮ್ಮ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಮಂಜುನಾಥ ಮತ್ತು ಲಕ್ಷ್ಮಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದರು.
20 ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ 14 ಜನ ಜೆಡಿಎಸ್ ಬೆಂಬಲವಾಗಿ ಹಾಗೂ 6 ಜನ ಕಾಂಗ್ರೆಸ್ ಪರವಾಗಿ ಮತ್ತು ಉಪಾಧ್ಯಕ್ಷೀಯ ಚುನಾವಣೆಯಲ್ಲಿ 12 ಜನ ಜೆಡಿಎಸ್ ಬೆಂಬಲವಾಗಿ ಹಾಗೂ 8 ಜನ ಕಾಂಗ್ರೆಸ್ ಪರವಾಗಿ ಮತ ಚಲಾವಣೆ ಮಾಡಿದ್ದರು.
ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಅನಿತಾ ಪ್ರಕಟಿಸಿದ ನಂತರ ಜೆಡಿಎಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸಮೂರ್ತಿ ಮತ್ತು ಉಪಾಧ್ಯಕ್ಷರಾದ ಭಾಗ್ಯಮ್ಮ ಅವರಿಗೆ ಗಣ್ಯರು ಅಭಿನಂದನೆಗಳು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಮೆಳೇಕೋಟೆ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷರಾದ ಶ್ವೇತಾ ಮುನಿಶಾಮಿ ಗೌಡ, ಪ್ರೀತಿ ಗೌರೀಶ್ ಮತ್ತು ಪಿಡಿಒ ಗಂಗಭೈರಪ್ಪ, ಚುನಾವಣಾ ಅಧಿಕಾರಿ ಅನಿತಾದೇವಿ.ಎನ್ ನಾಯಕ್, ಸದಸ್ಯರುಗಳಾದ ಬೈರೇಗೌಡ, ಮುನೇಗೌಡ, ಉದ್ಯಮಿ ಸಂದೀಪ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ಜೆಡಿಎಸ್ ಮುಖಂಡರಾದ ಚಿಕ್ಕಪ್ಪಯ್ಯ, ಗೌರೀಶ್, ಮುರುಳಿ, ಶ್ರೀನಿವಾಸ್ ಶೆಟ್ಟರ್, ಉದಯ ಆರಾಧ್ಯ, ನಂದೀಶ್ ಮತ್ತಿತರರು ಭಾಗವಹಿಸಿದ್ದರು.
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…