ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಶ್ರೀನಿವಾಸಮೂರ್ತಿ ಮತ್ತು ಭಾಗ್ಯಮ್ಮ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹಾಗೂ ಮಂಜುನಾಥ ಮತ್ತು ಲಕ್ಷ್ಮಮ್ಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದರು.
20 ಸದಸ್ಯ ಬಲದ ಪಂಚಾಯಿತಿಯಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ 14 ಜನ ಜೆಡಿಎಸ್ ಬೆಂಬಲವಾಗಿ ಹಾಗೂ 6 ಜನ ಕಾಂಗ್ರೆಸ್ ಪರವಾಗಿ ಮತ್ತು ಉಪಾಧ್ಯಕ್ಷೀಯ ಚುನಾವಣೆಯಲ್ಲಿ 12 ಜನ ಜೆಡಿಎಸ್ ಬೆಂಬಲವಾಗಿ ಹಾಗೂ 8 ಜನ ಕಾಂಗ್ರೆಸ್ ಪರವಾಗಿ ಮತ ಚಲಾವಣೆ ಮಾಡಿದ್ದರು.
ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಅನಿತಾ ಪ್ರಕಟಿಸಿದ ನಂತರ ಜೆಡಿಎಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಿವಾಸಮೂರ್ತಿ ಮತ್ತು ಉಪಾಧ್ಯಕ್ಷರಾದ ಭಾಗ್ಯಮ್ಮ ಅವರಿಗೆ ಗಣ್ಯರು ಅಭಿನಂದನೆಗಳು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಅಪ್ಪಯಣ್ಣ, ಕುರುವಿಗೆರೆ ನರಸಿಂಹಯ್ಯ, ಮೆಳೇಕೋಟೆ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷರಾದ ಶ್ವೇತಾ ಮುನಿಶಾಮಿ ಗೌಡ, ಪ್ರೀತಿ ಗೌರೀಶ್ ಮತ್ತು ಪಿಡಿಒ ಗಂಗಭೈರಪ್ಪ, ಚುನಾವಣಾ ಅಧಿಕಾರಿ ಅನಿತಾದೇವಿ.ಎನ್ ನಾಯಕ್, ಸದಸ್ಯರುಗಳಾದ ಬೈರೇಗೌಡ, ಮುನೇಗೌಡ, ಉದ್ಯಮಿ ಸಂದೀಪ್. ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ, ಜೆಡಿಎಸ್ ಮುಖಂಡರಾದ ಚಿಕ್ಕಪ್ಪಯ್ಯ, ಗೌರೀಶ್, ಮುರುಳಿ, ಶ್ರೀನಿವಾಸ್ ಶೆಟ್ಟರ್, ಉದಯ ಆರಾಧ್ಯ, ನಂದೀಶ್ ಮತ್ತಿತರರು ಭಾಗವಹಿಸಿದ್ದರು.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…