ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.
ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.
ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.
ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.
ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.
ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…