ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

2 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

3 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

14 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

15 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

17 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

1 day ago