ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

47 minutes ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

1 hour ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

5 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

16 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

17 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

1 day ago