ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.
ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.
ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.
ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.
ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.
ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…