ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.
ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.
ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.
ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.
ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.
ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…