ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

36 minutes ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

2 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

10 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

11 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

23 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 day ago