ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago