ಮೆಸ್ಸಿ ಕಾಲ್ಚಳಕ : ಅಜೆ೯ಂಟೈನಾಗೆ ಒಲಿದ ಫಿಫಾ ಫುಟ್ಬಾಲ್ ವರ್ಲ್ಡ್ ಕಪ್

ಕಳೆದೊಂದು ತಿಂಗಳಿಂದ ವಿಶ್ವದೆಲ್ಲೆಡೆ ಫಿಫಾ ಫುಟ್ಬಾಲ್ ವಿಶ್ವಕಪ್ ಜ್ವರ ಹೆಚ್ಚಾಗಿದ್ದು ಎಲ್ಲಾ ರಾಷ್ಟ್ರಗಳಲ್ಲಿಯೂ ಫುಟ್ಬಾಲ್ ಪ್ರೇಮಿಗಳು ತಮ್ಮ ನೆಚ್ಚಿನ ತಂಡ ಗೆಲುವು ಸಾಧಿಸಲಿ ಎಂದು ಪ್ರಾರ್ಥಿಸಿದ್ದರು.

ಅಜೆ೯ಂಟೈನಾ ಅಭಿಮಾನಿಗಳು ತುಸು ಹೆಚ್ಚೇ ಪ್ರಾರ್ಥನೆ ಸಲ್ಲಿಸಿದ್ದರು ಕಾರಣ ಮೆಸ್ಸಿ, ವಿಶ್ವ ಶ್ರೇಷ್ಠ ಆಟಗಾರನ ಕೊನೆಯ ವರ್ಲ್ಡ್ ಕಪ್ ಇದಾಗಿದ್ದು ಗೆಲುವಿನ ವಿದಾಯ ಹೇಳುವುದು ವಿಶ್ವದ ಎಲ್ಲಾ ಫುಟ್ಬಾಲ್ ಪ್ರೇಮಿಗಳ ಕನಸಾಗಿದ್ದು ಇದೀಗ ನನಸಾಗಿದೆ.

ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೌದಿ ಅರೇಬಿಯಾದ ವಿರುದ್ಧ ಸೊಲುವ ಮೂಲಕ ತನ್ನ ಅಭಿಯಾನ ಆರಂಭಿಸಿದ ಅಜೆ೯ಂಟೈನಾ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟಿದೆ.

ನಿಗದಿತ ಸಮಯದಲ್ಲಿ ಸಮಬಲ ಸಾಧಿಸಿದ ಎರಡೂ ತಂಡಗಳು 3-3 ಗೋಲುಗಳನ್ನುಗಳಿಸಿದರು, ಹೆಚ್ಚುವರಿ 30 ನಿಮಿಷದಲ್ಲಿ ಅಜೆ೯ಂಟೈನಾ ಪರವಾಗಿ ಮೆಸ್ಸಿ ಹಾಗೂ ಫ್ರಾನ್ಸ್ ಪರವಾಗಿ ಎಂಬಾಪೆ ಮತ್ತೊಂದು ಗೋಲು ಬಾರಿಸುವ ಮೂಲಕ ಅಭಿಮಾನಿಗಳ ಕಾತರವನ್ನು ಮತ್ತಷ್ಟು ಹೆಚ್ಚಿಸಿದರು.

ಫಲಿತಾಂಶಕ್ಕಾಗಿ ಎರಡು ತಂಡಗಳಿಗೆ ಪೆನಾಲ್ಟಿ ಅವಕಾಶ ನೀಡಲಾಯಿತು, ಅಜೆ೯ಂಟೈನಾ 4 ಹಾಗೂ ಫ್ರಾನ್ಸ್ 2 ಗೋಲು ಬಾರಿಸುವ ಮೂಲಕ ಅಜೆ೯ಂಟೈನಾ ಮೂರನೇ ಬಾರಿಗೆ ಫಿಫಾ ಫುಟ್ಬಾಲ್ ವಿಶ್ವಕಪ್ ತನ್ನದಾಗಿಸಿಕೊಂಡಿತು.

ಫಿಫಾ ವಿಶ್ವಕಪ್ ಅಜೆ೯ಂಟೈನಾ ತಂಡಕ್ಕೆ 347 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಫ್ರಾನ್ಸ್ 248 ಕೋಟಿ ರೂಪಾಯಿ ನಗದು ಬಹುಮಾನ ಸಿಕ್ಕಿದ್ದು ವಿಶ್ವ ಶ್ರೇಷ್ಠ ಆಟಗಾರ ಲಿಯೋನಲ್ ಮೆಸ್ಸಿ ಗೌರವಯುತ ಗೆಲುವು ಸಾಧಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago