ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ‌ ಕೇಸ್: ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ

ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿತ್ತು….

ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಹಿನ್ನೆಲೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ವಿವರ…

ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….

ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಕರಡಿ ಹಲಸಿನ‌‌ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ‌ ಕೇಳುತ್ತಿದ್ದಂತೆ ಮರದಿಂದ ಇಳಿದು ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ…

ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…

ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ‌ ಮಾಡಿದ್ದಾರೆ.

ಗ್ರಾಮಸ್ಥರ ಮನವಿ‌ ಹಿನ್ನೆಲೆ ಕರಡಿ, ಚಿರತೆ ಸೆರೆ ಹಿಡಿಯಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ….

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

19 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago