ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ‌ ಕೇಸ್: ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ

ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿತ್ತು….

ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಹಿನ್ನೆಲೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ವಿವರ…

ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….

ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಕರಡಿ ಹಲಸಿನ‌‌ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ‌ ಕೇಳುತ್ತಿದ್ದಂತೆ ಮರದಿಂದ ಇಳಿದು ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ…

ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…

ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ‌ ಮಾಡಿದ್ದಾರೆ.

ಗ್ರಾಮಸ್ಥರ ಮನವಿ‌ ಹಿನ್ನೆಲೆ ಕರಡಿ, ಚಿರತೆ ಸೆರೆ ಹಿಡಿಯಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ….

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago