ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿತ್ತು….
ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಹಿನ್ನೆಲೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ವಿವರ…
ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….
ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಕರಡಿ ಹಲಸಿನ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ ಕೇಳುತ್ತಿದ್ದಂತೆ ಮರದಿಂದ ಇಳಿದು ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ…
ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…
ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ಗ್ರಾಮಸ್ಥರ ಮನವಿ ಹಿನ್ನೆಲೆ ಕರಡಿ, ಚಿರತೆ ಸೆರೆ ಹಿಡಿಯಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…