ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಮೈಯಲ್ಲಾ ಪರಚಿ ಗಾಯಪಡಿಸಿದ ಕರಡಿ

ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿದೆ….

ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….

ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಹಲಸಿನ‌‌ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ‌ ಕೇಳುತ್ತಿದ್ದಂತೆ ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ…

ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…

ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ‌ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 hour ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

3 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

3 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

5 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

9 hours ago

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

10 hours ago