ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಮೈಯಲ್ಲಾ ಪರಚಿ ಗಾಯಪಡಿಸಿದ ಕರಡಿ

ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿದೆ….

ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….

ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಹಲಸಿನ‌‌ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ‌ ಕೇಳುತ್ತಿದ್ದಂತೆ ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ…

ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…

ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ‌ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

5 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

6 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

19 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago