ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಮೈಯಲ್ಲಾ ಪರಚಿ ಗಾಯಪಡಿಸಿದ ಕರಡಿ

ಮೇಕೆ ಮೇಯಿಸುತ್ತಿದ್ದ ರೈತನ ಮೇಲೆ ಎರಗಿದ ಕರಡಿ, ಮನಸೋಇಚ್ಛೆ ರೈತನ ಮೈಯಲ್ಲಾ ಪರಚಿ ಗಾಯಪಡಿಸಿರುವ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಕುಕ್ಕಲಹಳ್ಳಿ ಬಳಿ ಇಂದು ಮಧ್ಯಾಹ್ನ ಸುಮಾರು 3:50ರಲ್ಲಿ ನಡೆದಿದೆ….

ಕುಕ್ಕಲಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (58) ಕರಡಿ ದಾಳಿಯಿಂದ ಗಾಯಗೊಂಡ ರೈತ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಕ್ಕಲಹಳ್ಳಿ ಗ್ರಾಮದ ಹೊರವಲಯದಲ್ಲಿ ಎಂದಿನಂತೆ ಮೇಕೆ ಮೇಯಿಸಲು ರೈತ ಲಕ್ಷ್ಮಿನರಸಪ್ಪ ಹೋಗಿದ್ದಾರೆ. ಸುಮಾರು 3:50ರ ಸಮಯದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕರಡಿ ಏಕಾಏಕಿ ರೈತನ ಮೇಲೆ ದಾಳಿ ನಡೆಸಿದೆ….

ಘಟನಾ ಸ್ಥಳದಲ್ಲಿ ಮೂರ್ನಾಲ್ಕು ಹಲಸಿನ ಮರಗಳಿದ್ದು, ಹಲಸಿನ‌‌ ಹಣ್ಣು ತಿನ್ನಲು ಹಲಸಿನ ಮರ ಹತ್ತಿದ್ದು, ರೈತನ ಶಬ್ಧ‌ ಕೇಳುತ್ತಿದ್ದಂತೆ ರೈತನ ಮೇಲೆ ಎರಗಿ ಮೈಯಲ್ಲಾ ಪರಚಿ ಗಾಯಪಡಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ…

ಕರಡಿ ದಾಳಿಯಿಂದ ಗಾಯಗೊಂಡ ಲಕ್ಷ್ಮಿನರಸಪ್ಪನವರು ಕೂಡಲೇ ಹೊಸಹಳ್ಳಿ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆದಿದ್ದಾರೆ…

ಹೊಸಹಳ್ಳಿ ವ್ಯಾಪ್ತಿಯ ಸುತ್ತಮುತ್ತಾ ಗ್ರಾಮಗಳಲ್ಲಿ ಚಿರತೆ, ಕರಡಿಗಳ ಕಾಟ ಹೆಚ್ಚಾಗಿದೆ.. ಕೂಡಲೇ ಇವುಗಳನ್ನು ಸೆರೆ ಹಿಡಿದು ನೆಮ್ಮದಿ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯಲ್ಲಿ ಮನವಿ‌ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

29 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 hour ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago