ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ ನ್ಯಾಯಾಲಯ, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.
2021ರ ಆಗಸ್ಟ್ 23ರಂದು ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮೂರು ವರ್ಷದ ಮಗು ನಯನಳಿಗೆ ಮೇಕೆಯೊಂದು ಗುದ್ದಿದ ಹಿನ್ನೆಲೆಯಲ್ಲಿ ಮೇಕೆಯನ್ನು ಕಟ್ಟಿ ಹಾಕುವಂತೆ ಮಗುವಿನ ಕುಟುಂಬದವರು ಆರೋಪಿಗಳಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ವಿ.ಟಿ. ಚಂದ್ರಶೇಖರ್ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು.
ಗಲಾಟೆ ವೇಳೆ ಆರೋಪಿ ರವಿ @ ರವಿಕುಮಾರ್ ಎಂಬಾತ ಚಂದ್ರಶೇಖರ್ ಅವರ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಆರೋಪಿಸಲಾಗಿತ್ತು. ಇತರ ಆರೋಪಿಗಳಾದ ಮುನಿಯಪ್ಪ ಹಾಗೂ ಮುನಿಯಮ್ಮ ಅವರು ಗಲಾಟೆಯಲ್ಲಿ ಭಾಗಿಯಾಗಿದ್ದರು. ಗಂಭೀರವಾಗಿ ಗಾಯಗೊಂಡ ಚಂದ್ರಶೇಖರ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದರು ಎಂದು ಪ್ರಕರಣದ ತನಿಖೆಯಲ್ಲಿ ತಿಳಿದುಬಂದಿತ್ತು.
ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿರುವ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸ್.ಸಿ. ನಂ.10009/2022ರಂತೆ ವಿಚಾರಣೆಗೆ ಒಳಪಟ್ಟಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದೆ.
ಐಪಿಸಿ ಕಲಂ 302ರಡಿ ಕೊಲೆ ಅಪರಾಧಕ್ಕೆ ಆರೋಪಿ ರವಿ @ ರವಿಕುಮಾರ್ಗೆ ಕಠಿಣ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಲಾಗಿದೆ. ಇನ್ನು ಐಪಿಸಿ ಕಲಂ 323ರಡಿ ಮುನಿಯಪ್ಪನಿಗೆ 6 ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ಮುನಿಯಮ್ಮಗೆ 2 ತಿಂಗಳ ಸರಳ ಕಾರಾಗೃಹ ಶಿಕ್ಷೆ ಮತ್ತು 1,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಟಿ.ಎನ್. ನಟರಾಜ್ ಅವರು ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆಯ ಮೇಲ್ವಿಚಾರಣೆಯನ್ನು ಅಭಿಯೋಜನಾ ಇಲಾಖೆಯ ಅಧಿಕಾರಿಗಳು ನಡೆಸಿದ್ದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…